ತರಳಬಾಳು ಶ್ರೀಗಳು ರೈತರ ಬಾಳಿನ ಆಶಾಕಿರಣ: ಮಾಜಿ ಪ್ರಧಾನಿ ದೇವೇಗೌಡ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಹಳೇಬೀಡು: ಸರ್ಕಾರ ಯಾವುದೇ ಇರಲಿ, ಸದಾ ರೈತರಪರ ಹೋರಾಟ ಮಾಡಿ ಕರೆ-ಕಟ್ಟೆ ತುಂಬಿಸುವ ತರಳಬಾಳು ಶ್ರೀಗಳು ರೈತರ ಬಾಳಿನ ಆಶಾ ಕಿರಣವಾಗಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.‌ದೇವೇಗೌಡ ಹೇಳಿದರು.

taralbalu3

ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅಂತರ್ಜಲ ಮಟ್ಟ ಕುಸಿತದ ಕೆಟ್ಟ ಪರಿಸ್ಥಿತಿಯಲ್ಲಿಯೂ ಕೆರೆ -ಕಟ್ಟೆಗಳನ್ನು ತುಂಬಿಸುವಲ್ಲಿ ತರಳಬಾಳು ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಕಾರ್ಯ ಶ್ಲಾಘನೀಯ . ಫಸಲ್ ಭೀಮಾ ಯೋಜನೆಯಿಂದ ಯಾವುದೇ ಪ್ರಯೋಜನೆಯಿಂದ ಯಾವುದೇ ಪ್ರಯೋಜವಾಗಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡುವ ಮೂಲಕ ಸದಾ ರೈತರ ಪರ ಕಾಳಜಿ ಹೊಂದಿದ್ದಾರೆ ಎಂದರು.

ನಾನು ಈ ಕಾರ್ಯಕ್ರಮಕ್ಕೆ ಬರುವುದಕ್ಕಿಂತ ಮುನ್ನ ತುಂಬಾ ಎಚ್ಚರಿಕೆಯಿಂದ ಬಂದಿದ್ದೇನೆ. ಬೇರೆ ಯಾವುದೇ ಕಾರ್ಯಕ್ರಮಕ್ಕೂ ಹೋದರು ಇಷ್ಟೊಂದು ಎಚ್ಚರಿಕೆ ವಹಿಸುವುದಿಲ್ಲ. ಆದರೆ, ಈ ಕಾರ್ಯಕ್ರದಲ್ಲಿ ತುಂಬಾ ಎಚ್ಚರಿಕೆ ವಹಿಸಿದ್ದೇನೆ. ಏಕೆಂದರೆ ಈ ಪೀಠದ ಘನತೆ-ಗೌರವ ಅಷ್ಟರ ಮಟ್ಟಿಗೆ ಇದೆ. ಶ್ರೀಗಳು ದಿನ ಪತ್ರಿಕೆಗಳಿಗೆ ಬರೆಯುವ ಲೇಖನವನ್ನು ನಾನು ತಪ್ಪದೇ ಓದುತ್ತೇನೆ. ಈ ಲೇಖನಗಳಿಂದ ನಮ್ಮಲ್ಲಿ ಏನು ತಪ್ಪಿದೆ ಎಂಬುದನ್ನು ತಿದ್ದಿಕೊಳ್ಳಲು ಸಹಕಾರಿಯಾಗಿದೆ. ಅದೇ ರೀತಿ ಅಧಿಕಾರಿಗಳಿಂದ ಯಾವುದೇ ಕಾರ್ಯ ಆಗದಿದ್ದಲ್ಲಿ, ಅವರನ್ನು ಕರೆದು ಬುದ್ಧಿವಾದ ಹೇಳಿ ಸಾರ್ವಜನಿಕ ಕೆಲಸ ಕಾರ್ಯಗಳನ್ನು ಮಾಡಿಸುತ್ತಾರೆ ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *