ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 649, ರಾಜ್ಯದಲ್ಲಿ 55ಕ್ಕೆ ಏರಿಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ನವದೆಹಲಿ: ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 42 ಪಾಸಿಟಿವ್ ಕೇಸ್ ಜೊತೆ 4 ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ. ಇಡೀ ದೇಶದಲ್ಲಿ 649 ಜನ ಕೊರೊನಾ ಸೊಂಕಿತರಾಗಿದ್ದು, ರಾಜ್ಯದಲ್ಲಿ 55 ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿ, ಭಾರತದಲ್ಲಿ ಸದ್ಯ ಈಗ 649 ಕೊರೊನಾ ಪ್ರಕರಣಗಳಿವೆ. ಈ ಪೈಕಿ 13 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

649 ರೋಗಿಗಳ ಪೈಕಿ 593 ರೋಗಿಗಳು ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ 42 ರೋಗಿಗಳು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದರಲ್ಲಿ‌  47 ಮಂದಿ ವಿದೇಶಿಯರು ಇದ್ದಾರೆ.

ಇನ್ನು  ಕರ್ನಾಟಕದಲ್ಲಿ ಕೊರೊನಾ ಪೀಡಿತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ. ಇದು ಹೊಸದಾಗಿ 4 ಮಂದಿಯಲ್ಲಿ ಕೊರೊನಾ ಪ್ರಕರಣ ದೃಢಪಟ್ಟಿದೆ.

ರಾಜ್ಯದಲ್ಲಿ ವಿದೇಶಕ್ಕೆ ತೆರಳಿದದವರಿಗೆ ಮತ್ತು ಅವರ ಜೊತೆ ಸಂಪರ್ಕಕ್ಕೆ ಬಂದ ವ್ಯಕ್ತಿಗಳಿಗೆ ಮಾತ್ರ ಇಲ್ಲಿವರೆಗೆ  ಕೊರೊನಾ ಬಂದಿತ್ತು. ಆದ್ರೀಗ ಯಾರ ಸಂಪರ್ಕದಲ್ಲಿ ಇರದ  ವ್ಯಕ್ತಿಗೆ ಕೊರೊನಾ ಬಂದಿದೆ. ಈ ವ್ಯಕ್ತಿಗೆ ಕೊರೊನಾ ಬಂದಿದ್ದು ಹೇಗೆ ಎನ್ನುವ ಪ್ರಶ್ನೆ ಎದ್ದಿದೆ. ಇಂದು 4 ಹೊಸ ಪ್ರಕರಣದಿಂದಾಗಿ ಕರ್ನಾಟಕದಲ್ಲಿ ಕೊರೊನಾ ಪೀಡಿತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ.

ಮೈಸೂರು ಜಿಲ್ಲೆಯ 35 ವರ್ಷದ ಪುರುಷನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ವ್ಯಕ್ತಿ ಯಾವುದೇ ಹೊರಗಿನ ಪ್ರದೇಶಕ್ಕೆ ತೆರಳಿಲ್ಲ. ಜೊತೆಗೆ ಕೊರೊನಾ ಸೋಂಕು ಪಾಸಿಟಿವ್ ಇರುವ ವ್ಯಕ್ತಿಗಳ ಜೊತೆ ಸಂಪರ್ಕಕ್ಕೆ ಬಂದಿಲ್ಲ. ಈ ವ್ಯಕ್ತಿ ನಂಜನಗೂಡಿನಲ್ಲಿರುವ ಒಂದು ಔಷಧ ಉತ್ಪಾದನಾ ಕೈಗಾರಿಕೆಯ ಗುಣ ನಿಯಂತ್ರಣ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಂದರ್ಭದಲ್ಲಿ ಅನೇಕ ವೈದ್ಯಕೀಯ ತಂತ್ರಜ್ಞರೊಂದಿಗೆ ಸಂಪರ್ಕಕ್ಕೆ ಬಂದಿದ್ದಾರೆ. ಅವರ ವಿವರದ ಬಗ್ಗೆ ವೈದ್ಯಕೀಯ ತನಿಖೆ ನಡೆಯುತ್ತಿದೆ. ಇಲ್ಲಿಯವರೆಗೆ ಏಳು ಜನ ಪ್ರಾಥಮಿಕ ಸಂಪರ್ಕ ವ್ಯಕ್ತಿಗಳನ್ನು ಪತ್ತೆ ಮಾಡಿದ್ದು, ಅವರನ್ನು ಮನೆಯಲ್ಲಿಯೇ ಕ್ವಾರಂಟೈನ್‍ನಲ್ಲಿ ಇಡಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *