Connect with us

Dvgsuddi Kannada | online news portal | Kannada news online

ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 649, ರಾಜ್ಯದಲ್ಲಿ 55ಕ್ಕೆ ಏರಿಕೆ

ಪ್ರಮುಖ ಸುದ್ದಿ

ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 649, ರಾಜ್ಯದಲ್ಲಿ 55ಕ್ಕೆ ಏರಿಕೆ

ನವದೆಹಲಿ: ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 42 ಪಾಸಿಟಿವ್ ಕೇಸ್ ಜೊತೆ 4 ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ. ಇಡೀ ದೇಶದಲ್ಲಿ 649 ಜನ ಕೊರೊನಾ ಸೊಂಕಿತರಾಗಿದ್ದು, ರಾಜ್ಯದಲ್ಲಿ 55 ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿ, ಭಾರತದಲ್ಲಿ ಸದ್ಯ ಈಗ 649 ಕೊರೊನಾ ಪ್ರಕರಣಗಳಿವೆ. ಈ ಪೈಕಿ 13 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

649 ರೋಗಿಗಳ ಪೈಕಿ 593 ರೋಗಿಗಳು ದೇಶದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ 42 ರೋಗಿಗಳು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದರಲ್ಲಿ‌  47 ಮಂದಿ ವಿದೇಶಿಯರು ಇದ್ದಾರೆ.

ಇನ್ನು  ಕರ್ನಾಟಕದಲ್ಲಿ ಕೊರೊನಾ ಪೀಡಿತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ. ಇದು ಹೊಸದಾಗಿ 4 ಮಂದಿಯಲ್ಲಿ ಕೊರೊನಾ ಪ್ರಕರಣ ದೃಢಪಟ್ಟಿದೆ.

ರಾಜ್ಯದಲ್ಲಿ ವಿದೇಶಕ್ಕೆ ತೆರಳಿದದವರಿಗೆ ಮತ್ತು ಅವರ ಜೊತೆ ಸಂಪರ್ಕಕ್ಕೆ ಬಂದ ವ್ಯಕ್ತಿಗಳಿಗೆ ಮಾತ್ರ ಇಲ್ಲಿವರೆಗೆ  ಕೊರೊನಾ ಬಂದಿತ್ತು. ಆದ್ರೀಗ ಯಾರ ಸಂಪರ್ಕದಲ್ಲಿ ಇರದ  ವ್ಯಕ್ತಿಗೆ ಕೊರೊನಾ ಬಂದಿದೆ. ಈ ವ್ಯಕ್ತಿಗೆ ಕೊರೊನಾ ಬಂದಿದ್ದು ಹೇಗೆ ಎನ್ನುವ ಪ್ರಶ್ನೆ ಎದ್ದಿದೆ. ಇಂದು 4 ಹೊಸ ಪ್ರಕರಣದಿಂದಾಗಿ ಕರ್ನಾಟಕದಲ್ಲಿ ಕೊರೊನಾ ಪೀಡಿತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ.

ಮೈಸೂರು ಜಿಲ್ಲೆಯ 35 ವರ್ಷದ ಪುರುಷನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ವ್ಯಕ್ತಿ ಯಾವುದೇ ಹೊರಗಿನ ಪ್ರದೇಶಕ್ಕೆ ತೆರಳಿಲ್ಲ. ಜೊತೆಗೆ ಕೊರೊನಾ ಸೋಂಕು ಪಾಸಿಟಿವ್ ಇರುವ ವ್ಯಕ್ತಿಗಳ ಜೊತೆ ಸಂಪರ್ಕಕ್ಕೆ ಬಂದಿಲ್ಲ. ಈ ವ್ಯಕ್ತಿ ನಂಜನಗೂಡಿನಲ್ಲಿರುವ ಒಂದು ಔಷಧ ಉತ್ಪಾದನಾ ಕೈಗಾರಿಕೆಯ ಗುಣ ನಿಯಂತ್ರಣ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಂದರ್ಭದಲ್ಲಿ ಅನೇಕ ವೈದ್ಯಕೀಯ ತಂತ್ರಜ್ಞರೊಂದಿಗೆ ಸಂಪರ್ಕಕ್ಕೆ ಬಂದಿದ್ದಾರೆ. ಅವರ ವಿವರದ ಬಗ್ಗೆ ವೈದ್ಯಕೀಯ ತನಿಖೆ ನಡೆಯುತ್ತಿದೆ. ಇಲ್ಲಿಯವರೆಗೆ ಏಳು ಜನ ಪ್ರಾಥಮಿಕ ಸಂಪರ್ಕ ವ್ಯಕ್ತಿಗಳನ್ನು ಪತ್ತೆ ಮಾಡಿದ್ದು, ಅವರನ್ನು ಮನೆಯಲ್ಲಿಯೇ ಕ್ವಾರಂಟೈನ್‍ನಲ್ಲಿ ಇಡಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top