Connect with us

Dvgsuddi Kannada | online news portal | Kannada news online

ಗುರಿ ಸಾಧನೆಯತ್ತ ಹೆಜ್ಜೆ ಹಾಕಲು ವಾಲ್ಮೀಕಿ ಶ್ರೀಗಳ ಕರೆ

ಜಿಲ್ಲಾ ಸುದ್ದಿ

ಗುರಿ ಸಾಧನೆಯತ್ತ ಹೆಜ್ಜೆ ಹಾಕಲು ವಾಲ್ಮೀಕಿ ಶ್ರೀಗಳ ಕರೆ

ಡಿವಿಜಿ ಸುದ್ದಿ, ಮಂಡ್ಯ: ವಿದ್ಯಾರ್ಥಿಗಳು ಶ್ರದ್ಧಾಭಕ್ತಿಯಿಂದ ಜ್ಞಾನ ಪಡೆದುಕೊಂಡು ಒಳ್ಳೆಯ ಮಾರ್ಗದಲ್ಲಿ ಸಾಗಬೇಕು. ನ್ಯಾಯ, ನೀತಿ, ಧರ್ಮ ಹಾಗೂ ಸತ್ಯದ ದಾರಿಯಲ್ಲಿ ಸಾಗುವ ಮೂಲಕ ಜೀವನದಲ್ಲಿ ಯಶಸ್ಸು ಗಳಿಸಬೇಕು ಎಂದು ಕಿವಿ ಮಾತು ಹೇಳಿದರು.

ಮಂಡ್ಯ ಕೃಷ್ಣರಾಜಪೇಟೆ ಪಟ್ಟಣದ ಜೆಎಸ್ ಎಸ್ ಶಿಕ್ಷಣ ಸಂಸ್ಥೆಗೆ ರಾಜನಹಳ್ಳಿಯ ವಾಲ್ಮೀಕಿ ಪೀಠದ  ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿಗಳು ಭೇಟಿ ನೀಡಿ ಸತ್ಸಂಗ ಕಾರ್ಯಕ್ರಮ  ಸಾನಿಧ್ಯ ವಹಿಸಿ ಮಾತನಾಡಿದರು.

ಶ್ರೀಗಳು ಗ್ರಾಮೀಣ ಪ್ರದೇಶದ ಬಡ ಮಕ್ಕಳ ಶೈಕ್ಷಣಿಕ ವಿಕಾಸಕ್ಕೆ ಬಿಜಿಎಸ್ ಶಿಕ್ಷಣ ಸಂಸ್ಥೆಗಳು ಹಾಗೂ ಆದಿಚುಂಚನಗಿರಿ ಮಠದ ಕೊಡುಗೆಯು ಅಪಾರವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ಶ್ರೀಮಠದ ಸೇವಾ ಕಾರ್ಯವು ಎಲ್ಲರಿಗೂ ಮಾದರಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಹೇಮಗಿರಿಯ ಅದಿಚುಂಚನಗಿರಿ ಶಾಖಾ ಮಠದ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ, ಪತ್ರಕರ್ತ ಬಳ್ಳೇಕೆರೆ ಮಂಜುನಾಥ್, ತಾಲ್ಲೂಕು ನಾಯಕ ಸಮಾಜದ ಮುಖಂಡ ಅಗ್ರಹಾರ ಬಾಚಹಳ್ಳಿ ಆರ್. ಜಗದೀಶ್, ಸ್ವಾಮಿನಾಯಕ, ಜಯರಾಂನಾಯಕ, ನರೇಂದ್ರ ನಾಯಕ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಜಿಲ್ಲಾ ಸುದ್ದಿ

To Top