Connect with us

Dvgsuddi Kannada | online news portal | Kannada news online

ಲಾಕ್‍ಡೌನ್ ಆದೇಶ ಮೀರಿ ಓಡಾಡಿದರೆ ಬಂಧನ

ಪ್ರಮುಖ ಸುದ್ದಿ

ಲಾಕ್‍ಡೌನ್ ಆದೇಶ ಮೀರಿ ಓಡಾಡಿದರೆ ಬಂಧನ

ಡಿವಿಜಿ ಸುದ್ದಿ, ದಾವಣಗೆರೆ: ಸಾರ್ವಜನಿಕರು ವೈದ್ಯರ ಸಲಹಾ ಚೀಟಿ ಇಲ್ಲದೇ ಮೆಡಿಕಲ್ ಬಂದು ಕೆಮ್ಮು, ಶೀತ, ಜ್ವರ ಮತ್ತು ಗಂಟಲುನೋವಿಗೆ ಮಾತ್ರೆ ಅಥವಾ ಸಿರಪ್ ಖರೀದಿಸಿದರೆ ಮೆಡಿಕಲ್ ಶಾಪ್‍ನವರು ಅಂತಹ ವ್ಯಕ್ತಿಗಳ ಮೊಬೈಲ್ ಸಂಖ್ಯೆ ತೆಗೆದುಕೊಂಡು ಜಿಲ್ಲಾಡಳಿತದ ಸಹಾಯವಾಣಿ 1077 ಗೆ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದಾರೆ.

ಕೋವಿಡ್ -19 ನಿಯಂತ್ರಣ ಹಿನ್ನೆಲೆ ಯಾವುದೇ ಶೀತ, ಕೆಮ್ಮು, ಜ್ವರದಂತಹ ಪ್ರಕರಣಗಳನ್ನು ಕಡ್ಡಾಯವಾಗಿ ತಾಲ್ಲೂಕು ಅಥವಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ತೋರಿಸಿಕೊಳ್ಳಬೇಕು. ಈ ಆಸ್ಪತ್ರೆಗಳಲ್ಲಿ ಕೋವಿಡ್ 19 ಪರೀಕ್ಷೆಗೆ ಅವಕಾಶವಿದ್ದು, ಕೊರೊನಾ ನಿಯಂತ್ರಣಕ್ಕೆ ಸಹಕಾರಿಯಾಗಿದೆ. ಆದ ಕಾರಣ ವೈದ್ಯರ ಸಲಹೆ ಇಲ್ಲದೇ ಸಾರ್ವಜನಿಕರು ಕೆಮ್ಮು, ಶೀತ, ಜ್ವರದಂತಹ ಪ್ರಕರಣಗಳಿಗೆ ಔಷಧಿ ತೆಗೆದುಕೊಂಡಲ್ಲಿ ತಕ್ಷಣವೇ ಅವರ ಮೊಬೈಲ್ ಸಂಖ್ಯೆಯನ್ನು ತೆಗೆದುಕೊಂಡು ಜಿಲ್ಲಾಡಳಿತ 1077 ಗೆ ಮಾಹಿತಿ ನೀಡಿದಲ್ಲಿ ಅಂತಹ ವ್ಯಕ್ತಿಗಳಿಗೆ ಸೂಕ್ತ ಚಿಕಿತ್ಸೆಗೆ ಅವಕಾಶ ಮಾಡಿಕೊಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಲಾಕ್‍ಡೌನ್ ಮೀರಿ ಓಡಾಡಿದಲ್ಲಿ ಬಂಧನ : ಲಾಕ್‍ಡೌನ್ ಆದೇಶ ನಗರದ ಕುಂದುವಾಡ ಕೆರೆ ಬಳಿ ವಾಕ್ ಮಾಡುತ್ತಿದ್ದ ಸುಮಾರು 15 ಜನರನ್ನು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಬಂಧಿಸಿ, ಸುಮಾರು 2 ರಿಂದ 3 ಗಂಟೆ ಠಾಣೆಯಲ್ಲಿರಿಸಿ ನಂತರ ಬಿಡುಗಡೆಗೊಳಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಲಾಕ್‍ಡೌನ್ ಆದೇಶ ಮೀರಿ ವಿನಾಕಾರಣ ಮನೆಯಿಂದ ಹೊರಗೆ ಬಂದು ಓಡಾಡಿದರೆ ವಿಪತ್ತು ನಿರ್ವಹಣಾ ಕಾಯ್ದೆ 2005 ರನ್ವಯ ಸೂಕ್ತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹಾಗೂ ಎಸ್‍ಪಿ ಹನುಮಂತರಾಯ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top