ಪೊಲೀಸ್ ನಿರ್ಭಯ ತಂಡಕ್ಕೆ ಸನ್ಮಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿಸುದ್ದಿ.ಕಾಂ, ದಾವಣಗೆರೆ: ವನಿತ ಸಮಾಜ ಮತ್ತು ಜಿಲ್ಲಾ ಕ್ರೀಡಾಪಟುಗಳ ಸಂಘ ಸಹಯೋಗದೊಂದಿಗೆ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಸೆ. ೭ ರಂದು ಸಂಜೆ ೫.೩೦ಕ್ಕೆ ವನಿತ ಸಮಾಜ ಸಭಾಂಗಣದಲ್ಲಿ ಪೊಲೀಸ್ ನಿರ್ಭಯ ತಂಡದ ಸಿಬ್ಬಂದಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಪೊಲೀಸ್ ಇನ್ಸ್ಪೆಕ್ಟರ್‌ಗಳಾದ ನಾಗಮ್ಮ ಕೆ, ಶೈಲಶ್ರೀ ಎ.ಎಸ್, ಕಾನ್‌ಸ್ಟೆಬಲ್‌ಗಳಾದ ವತ್ಸಲಾ, ಗೌರಮ್ಮ, ಸಿದ್ಲಿಂಗಮ್ಮ, ಮಾಲತಿ ಬಾಯಿ, ಪುಷ್ಬಾಲತಾ, ಗಿರಿಯಮ್ಮ, ಭವಾನಿ, ನೇತ್ರಾವತಿ, ರೂಪ, ಲಕ್ಷ್ಮೀದೇವಿ, ಸಂಗೀತಾ, ಕಸ್ತೂರಿ, ಶಿವಲಿಂಗಮ್ಮ, ಮಮತಾ ಅವರಿಗೆ ಸನ್ಮಾನಿಸಲಾಗುವುದು ಎಂದು ಜಿಲ್ಲಾ ಕ್ರೀಡಾಪಟು ಸಂಘದ ಅಧ್ಯಕ್ಷ ಕೆ. ದಿನೇಶ್‌ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.

ಕಾರ್ಯಕ್ರಮವನ್ನು ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟಿಸಲಿದ್ದು, ಮುಖ್ಯ ಅಥಿತಿಗಳಾಗಿ ವೀರಶೈವ ಮಹಾಸಭಾದ ದಾವಣಗೆರೆ ಜಿಲ್ಲಾ ಅಧ್ಯಕ್ಷ ದೇವರಮನೆ ಶಿವಕುಮಾರ್, ಎಸ್‌ಪಿ ಹನುಮಂತರಾಯಪ್ಪ, ವನಿತ ಸಮಾಜದ ಗೌರವಧ್ಯಕ್ಷೆ ನಾಗಮ್ಮ ಕೇಶವಮೂರ್ತಿ, ಲಯನ್ಸ್ ಕ್ಲಬ್ ನ ಅಧ್ಯಕ್ಷ ವೈ.ಬಿ. ಸತೀಶ್, ಜಿಲ್ಲಾ ಕ್ರೀಡಾ ಪಟುಗಳ ಸಂಘದ ಉಪಾಧ್ಯಕ್ಷ ಶಿವಗಂಗಾಶ್ರೀನಿವಾಸ್ ಭಾಗಿಯಾಗಲಿದ್ದಾರೆ. ಆದ್ಯಕ್ಷತೆಯನ್ನು ವನಿತ ಸಮಾಜದ ಅಧ್ಯಕ್ಷೆ ಮಂಜುಳ ಬಸವಲಿಂಗಪ್ಪ, ಜಿಲ್ಲಾ ಕ್ರೀಡಾಪಟುಗಳ ಸಂಘದ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ವಹಿಸಿಕೊಳ್ಳಲಿದ್ದಾರೆ ಎಂದರು.

ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ:9844460336, 7483892205

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *