Connect with us

Dvgsuddi Kannada | online news portal | Kannada news online

ಮಾಜಿ ಸಿಎಂ ಸಿದ್ದರಾಮಯ್ಯ ಹೊಗಳಿದ ಸಂಸದ ಪ್ರತಾಪ್ ಸಿಂಹಗೆ ಎಚ್.ಸಿ.  ಮಹದೇವವಪ್ಪ ತರಾಟೆ..!

ಪ್ರಮುಖ ಸುದ್ದಿ

ಮಾಜಿ ಸಿಎಂ ಸಿದ್ದರಾಮಯ್ಯ ಹೊಗಳಿದ ಸಂಸದ ಪ್ರತಾಪ್ ಸಿಂಹಗೆ ಎಚ್.ಸಿ.  ಮಹದೇವವಪ್ಪ ತರಾಟೆ..!

ಡಿವಿಜಿ ಸುದ್ದಿ, ಮೈಸೂರು: ಫೇಸ್‍ಬುಕ್‍, ಟ್ವೀಟರ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೊಗಳಿದ್ದ ಸಂಸದ ಪ್ರತಾಪ್‍ಸಿಂಹಗೆ ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಫೇಸ್‍ಬುಕ್‍ನಲ್ಲೇ ತರಾಟೆ ತಗೆದುಕೊಂಡಿದ್ದಾರೆ.

ಪ್ರತಾಪ್ ಸಿಂಹ ಪೋಸ್ಟ್ ಪ್ರತಿಕ್ರಿಯೆ ನೀಡಿರುವ ಮಹದೇವಪ್ಪ, “ಕಳೆದ ಚುನಾವಣೆಯಲ್ಲಿ ಬಿಜೆಪಿಗರು ಸುಳ್ಳು ಪ್ರಚಾರ ಮಾಡಿದರು. ಶವ ರಾಜಕೀಯ ಮಾಡುತ್ತಾ ಅಪಪ್ರಚಾರ ಮಾಡಿದರು. ಆದರೆ ಈಗ ಸಿದ್ದರಾಮಯ್ಯರ ಸಾಧನೆಯನ್ನ ಶ್ಲಾಘಿಸುತ್ತಾರೆ. ಇದು ಬಿಜೆಪಿಗರ ಇಬ್ಬಂದಿ ನೀತಿ. ಈಗ ಸಿದ್ದರಾಮಯ್ಯರನ್ನ ಹೊಗಳಿರುವ ಈ ವ್ಯಕ್ತಿ ಮುಂದಿನ ಚುನಾವಣೆಗೆ ಇನ್ನೊಂದು ವರಸೆ ತೆಗೆಯಬಹುದು”ಎಂದು ಗರಂ ಆಗಿದ್ದಾರೆ.

mahadevappa

“ಹಾಗಾಗಿ ಯಾರು ಏನೇ ಹೇಳಿದರೂ ಜನರಿಗೆ ಕೆಲಸ ಮಾಡುವುದಷ್ಟೇ ನಮ್ಮ ಗುರಿಯಾಗಿರಬೇಕೆಂಬ ಸ್ಪಷ್ಟತೆ ನನಗಿದೆ. ಈ ನಿಟ್ಟಿನಲ್ಲಿ ಇಂತಹವರ ಕುತಂತ್ರ, ಇಬ್ಬಂದಿತನ ಮತ್ತು ಆತ್ಮವಂಚನೆಯ ಮಾತುಗಳನ್ನು ನಮ್ಮ ಜನರು ಅರ್ಥ ಮಾಡಿಕೊಳ್ಳಬೇಕಿರುವುದು ಈ ಕ್ಷಣದ ತುರ್ತು” ಎಂದು ಬರೆಯುವ ಮೂಲಕ ಸಿದ್ದರಾಮಯ್ಯರನ್ನು ಹೊಗಳಿದ್ದ ಪ್ರತಾಪ್ ಅವರಿಗೆ  ಟಾಂಗ್ ಕೊಟ್ಟಿದ್ದಾರೆ.

ಪ್ರತಾಪ್ ಸಿಂಹ ಪೋಸ್ಟ್:
“ಆತ್ಮೀಯರಾದ ಅಣ್ಣಯ್ಯ ನಾಯಕರು ಲಘು ಹೃದಯಾಘಾತಕ್ಕೊಳಗಾಗಿ ಮೈಸೂರಿನ ಜಯದೇವ ಆಸ್ಪತ್ರೆ ಸೇರಿದ್ದು, ಅವರನ್ನು ನೋಡಲು ಹೋಗಿದ್ದೆ. ಕಟ್ಟಡ ಮತ್ತು ವ್ಯವಸ್ಥೆ ಅದ್ಭುತವಾಗಿದೆ. 168 ಕೋಟಿ ಕೊಟ್ಟು ಅತ್ಯಾಧುನಿಕ ಕಟ್ಟಡ ನಿರ್ಮಾಣಕ್ಕೆ ಕಾರಣರಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಹೇಬ್ರಿಗೆ, ಉತ್ತಮ ಸೇವೆ ನೀಡುತ್ತಿರುವ ಮಂಜುನಾಥ್ ಅವರಿಗೆ ಧನ್ಯವಾದ” ಎಂದು ಪೋಸ್ಟ್ ಹಾಕಿದ್ದಾರೆ.ಸಿದ್ದರಾಮಯ್ಯ ಸರ್ಕಾರದ ಯೋಜನೆ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿರುವ ಪ್ರತಾಪ್‍ಸಿಂಹ ಬಗ್ಗೆ ನೆಟ್ಟಿಗರು ಸಹ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top