Connect with us

Dvgsuddi Kannada | online news portal | Kannada news online

ರೈತರಿಗೆ ಆಧಾರ ರಹಿತ ಕೃಷಿ ಸಾಲದ ಮಿತಿ 2 ಲಕ್ಷಕ್ಕೆ ಹೆಚ್ಚಿಸಿದ ಆರ್ ಬಿಐ

images 2024 02 22T105655.772

ಪ್ರಮುಖ ಸುದ್ದಿ

ರೈತರಿಗೆ ಆಧಾರ ರಹಿತ ಕೃಷಿ ಸಾಲದ ಮಿತಿ 2 ಲಕ್ಷಕ್ಕೆ ಹೆಚ್ಚಿಸಿದ ಆರ್ ಬಿಐ

ನವದೆಹಲಿ: ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕ್ (RBI) ಆಧಾರ ರಹಿತ ಕೃಷಿ ಸಾಲದ ಮಿತಿಯನ್ನು ₹ 1.6 ಲಕ್ಷದಿಂದ ₹ 2ಲಕ್ಷಕ್ಕೆ ಹೆಚ್ಚುಸಿ ಆದೇಶ ಹೊರಡಿಸಿದೆ. ‌ಈ ಪರಿಷ್ಕೃತ ಸಾಲದ ಮಿತಿ 1 ಜನವರಿ 2025 ರಿಂದ ಜಾರಿಗೆ ಬರಲಿದ್ದು, ದೇಶಾದ್ಯಂತ ರೈತರಿಗೆ ಪ್ರಯೋಜ ಆಗಲಿದೆ ನ ಎಂದು ಕೃಷಿ ಸಚಿವಾಲಯ ತಿಳಿಸಿದೆ.

ಹಣದುಬ್ಬರದ ಒತ್ತಡಗಳು ಕೃಷಿ ವಲಯದ ಮೇಲೆ ಪರಿಣಾಮ ಬೀರುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಇದರಿಂದ ಸಣ್ಣ ಮತ್ತು ಅತಿ ಸಣ್ಣ ಶೇ.86 ರಷ್ಟು ರೈತರಿಗೆ ಹೆಚ್ಚಿನ ಲಾಭವಾಗಲಿದೆ.

ನವೀಕರಿಸಿದ ಮಿತಿಯೊಳಗೆ ಸಾಲಗಳಿಗೆ ಆಧಾರ ಮತ್ತು ಮಾರ್ಜಿನ್ ಅವಶ್ಯಕತೆಗಳನ್ನು ಮನ್ನಾ ಮಾಡಲು ಬ್ಯಾಂಕುಗಳಿಗೆ ನಿರ್ದೇಶಿಸಲಾಗಿದೆ. ರೈತರಿಗೆ ಸಕಾಲಿಕ ಸಹಾಯವನ್ನು ಖಚಿತಪಡಿಸಿಕೊಳ್ಳಲು ಪರಿಷ್ಕೃತ ಮಾರ್ಗಸೂಚಿಗಳ ಅನುಷ್ಠಾನವನ್ನು ತ್ವರಿತಗೊಳಿಸುವಂತೆ ಆರ್‌ಬಿಐ ಬ್ಯಾಂಕ್ ಗಳಿಗೆ ಸೂಚಿಸಿದೆ.

ಹಣಕಾಸಿನ ಬೆಂಬಲ ಕಾರ್ಯವಿಧಾನ ವಿಶೇಷವಾಗಿ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆಸಿಸಿ) ಯನ್ನು ಸುಧಾರಿಸುವತ್ತ ಗಮನಹರಿಸಲಾಗುತ್ತದೆ. ತ್ವರಿತವಾಗಿ ಪಾವತಿಸುವವರಿಗೆ ಸಬ್ಸಿಡಿ 4% ಬಡ್ಡಿದರದಲ್ಲಿ ₹3 ಲಕ್ಷದವರೆಗಿನ ಸಾಲಗಳನ್ನು ನೀಡುತ್ತದೆ. ಸಾಲದ ಮಿತಿ ಕೃಷಿ ವಲಯವನ್ನು ಬಲಪಡಿಸುವುದಲ್ಲದೆ ಗ್ರಾಮೀಣ ಆರ್ಥಿಕ ಚಟುವಟಿಕೆಯನ್ನು ಉತ್ತೇಜಿಸುತ್ತದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top