ಡಿವಿಜಿಸುದ್ದಿ.ಕಾಂ ದಾವಣಗೆರೆ: ನಗರದ ಶ್ರೀಶೈಲ ಶಾಖಾ ಮಠದ ಜಗದ್ಗುರು ಪಂಚಾಚಾರ್ಯ ಮಂದಿರದಲ್ಲಿ ಸೆಪ್ಟೆಂಬರ್ 10 ರಂದು ಶ್ರೀ ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳ ಪುಣ್ಯಾರಾಧನೆ ಮತ್ತು ಸೆ.11,12 ರಂದು ಉತ್ತರ ಕರ್ನಾಟಕ ಪ್ರವಾಹ ಪೀಡಿತ ರಿಗೆ ನೆರವು ಸಂಗ್ರಹ ಕಾರ್ಯಕ್ರಮ ನಡೆಯಲಿದೆ.
ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿದ ಆವರಗೊಳ್ಳದ ಪುರವರ್ಗ ಮಠದ ಶ್ರೀ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಪ್ರತಿ ವರ್ಷ ಶ್ರೀ ವಾಗೀಶ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ ಅವರ ಪುಣ್ಯಾರಾಧನೆಯನ್ನು ಮೂರು ದಿನಗಳ ಕಾಲ ನಡೆಸಲಾಗುತ್ತಿತ್ತು. ಆದರೆ, ಈ ಬಾರಿ ಉತ್ತರ ಕರ್ನಾಟಕ ಪ್ರವಾಹ ಬಂದಿದ್ದರಿಂದ ಕಾರ್ಯಕ್ರಮವನ್ನು ಒಂದೇ ದಿನಕ್ಕೆ ಸೀಮಿತಗೊಳಿಸಿ, ಉಳಿದ ಎರಡು ದಿನಗಳ ಕಾಲ ಉತ್ತರ ಕರ್ನಾಟಕ ಪ್ರವಾಹ ಪರಿಹಾರಕ್ಕಾಗಿ ನೆರವು ಸಂಗ್ರಹಿಸುವ ಕಾರ್ಯಕ್ರಮ ನಡೆಯಲಿದೆ ಎಂದರು.
ಸೆ. 10 ರಂದು ಸಂಜೆ 6 ಗಂಟೆಗೆ ಶಾಸಕ ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅಥಿತಿಗಳಾಗಿ ಸಚಿವ ಬಸವರಾಜ್ ಬೊಮ್ಮಾಯಿ , ಸಂಸದ ಜಿ ಎಂ ಸಿದ್ದೇಶ್ವರ ಭಾಗಿ ಆಗಲಿದ್ದಾರೆ.
ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ:9844460336, 7483892205



