ಕುರಿಗಾಹಿನಿಂದಲೇ ಕುರಿ ಕಳ್ಳನ ಭೀಕರ ಕೊಲೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿಸುದ್ದಿ.ಕಾಂ, ಹರಿಹರ: ಕೊಲ್ಲಾಪುರ ಮೂಲದ ಕುರಿಗಾಹಿಗಳು ಮೆಲೆಬೆನ್ನೂರು ಮೂಲದ ಚಮನ್ ಸಾಬ್ (56) ಎಂಬಾತನನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ.

ತಾಲೂಕಿನ ಜಿ.ಟಿ.ಕಟ್ಟೆ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಕೊಲ್ಲಾಪುರ ಮೂಲದ ಕುರಿಗಾಹಿಗಳು ಪ್ರತಿ ವರ್ಷ ಹರಿಹರ ಹೊನ್ನಾಳಿ ತಾಲೂಕಿನ ಕೆಲವು ಪ್ರದೇಶಗಳಲ್ಲಿ ಕುರಿ ಕಾಯಲು ಬರುತ್ತಿದ್ದರು. ಪ್ರತಿ ವರ್ಷವೂ ಕೂಡ ರಾತ್ರಿ ವೇಳೆ ಕುರಿ ಕಳ್ಳತನ ಯಥೇಚ್ಛವಾಗಿ ನಡೆಯುತ್ತಿತ್ತು. ಇದರಿಂದ ರೋಸಿ ಹೋಗಿದ್ದ ಕುರಿಕಾಯುವರು ಹೇಗಾದರೂ ಮಾಡಿ ಈ ಕುರಿ ಕಳ್ಳರನ್ನು ಹಿಡಿಯಲೇ ಬೇಕು ಎಂಬ ನಿರ್ಧಾರಕ್ಕೆ ಬಂದಿದ್ದರು.

ಶನಿವಾರ ತಡರಾತ್ರಿ ಚಮನ್ ಸಾಬ್ ಮತ್ತು ಆತನ 4 ಜನ ಸಹಚರರು ರಾತ್ರಿ ವೇಳೆ ಕುರಿ ಕಳ್ಳತನ ಮಾಡಲು ಯತ್ನಿಸುತ್ತಿದ್ದಾಗ ಅವರಲ್ಲಿ 4ಜನ ಪರಾರಿ ಆಗಿದ್ದು ಚಮನ್ ಸಾಬ್ ಎಂಬಾತ ಸಿಕ್ಕಿಬಿದ್ದ ಸಂದರ್ಭದಲ್ಲಿ ರೊಚ್ಚಿಗೆದ್ದ ಕುರಿಗಾಹಿಗಳು, ತನ್ನ ಬಳಿ ಇದ್ದ ಕೊಡಲಿಯಿಂದ ಆತನ ತಲೆ ಕತ್ತರಿಸಿ ಕೊಲೆ ಮಾಡಿದ್ದಾನೆ. ಬೆಳಿಗ್ಗೆ ಪೊಲೀಸ್ ಠಾಣೆಗೆ ಬಂದು ಕುರಿಗಾಹಿ ನಡೆದ ಘಟನೆಯನ್ನು ವಿವರಿಸಿ ಶರಣಾಗಿದ್ದಾನೆ.

ಚಮನ್ ಸಾಬ್ ಎಂಬಾತನ ಮೇಲೆ ಈಗಾಗಲೇ ಹಲವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅನೇಕ ಸಲ ಕುರಿ ಕಳ್ಳತನದ ಆರೋಪ ಕೇಳಿ ಬಂದಿದ್ದವು. ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಮೆಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *